Wednesday, December 30, 2009

ನೂರೊಂದು ನೆನಪು ಎದೆಯಾಳದಿಂದ..

ವಿಷ್ಣು ವರ್ಧನ್ ಅವರ ಅಭಿನಯ ಸಾಮರ್ಥ್ಯವನ್ನು ಪ್ರಚುರಪಡಿಸಿದ 'ಬಂಧನ' ಚಿತ್ರದ ಈ ಹಾಡು ಎಂದೆಂದಿಗೂ ಮರೆಯಲಾಗದು.

ಸಾಹಿತ್ಯ : ಚಿ.ಉದಯಶಂಕರ್
ಸಂಗೀತ : ಎಂ.ರಂಗರಾವ್
ಗಾಯನ : ಎಸ್.ಪಿ.ಬಾಲಸುಬ್ರಮಣ್ಯಂ

ನೂರೊಂದು ನೆನಪು ಎದೆಯಾಳದಿಂದ
ಹಾಡಾಗಿ ಬಂತು ಆನಂದದಿಂದ
ಸಿಂಧೂರ ಬಿಂದು ನಗಲಮ್ಮ ಎಂದು
ಎಂದೆಂದು ಇರಲಮ್ಮ ಈ ದಿವ್ಯ ಬಂಧ
ನೂರೊಂದು ನೆನಪು ಎದೆಯಾಳದಿಂದ
ಹಾಡಾಗಿ ಬಂತು ಆನಂದದಿಂದ

ಒಲವೆಂಬ ಲತೆಯು ತಂದಂತ ಹೂವು
ಮುಡಿಯೇರೆ ನಲಿವು ಮುಡಿಜಾರೆ ನೋವು
ಕೈಗೂಡಿದಾಗ ಕಂಡಂತ ಕನಸು
ಅದೃಷ್ಟದಾಟ ತಂದಂತ ಸೊಗಸು
ಪ್ರೀತಿ ನಗುತಿರಲಿ ಬಾಳು ಬೆಳಗಿರಲಿ
ಪ್ರೀತಿ ನಗುತಿರಲಿ ಬಾಳು ಬೆಳಗಿರಲಿ
ನೀವೆಂದು ಇರಬೇಕು ಸಂತೋಷದಿಂದ

ನೂರೊಂದು ನೆನಪು ಎದೆಯಾಳದಿಂದ
ಹಾಡಾಗಿ ಬಂತು ಆನಂದದಿಂದ

ತುಟಿಮೇಲೆ ಬಂದಂತ ಮಾತೊಂದೆ ಒಂದು
ಎದೆಯಲ್ಲಿ ಉಳಿದಿದ್ದು ಮುನ್ನೂರ ಒಂದು
ಮೂರು ಗಂಟಲ್ಲಿ ಈ ಬಾಳ ನಂಟು
ಕೇಳಿ ಪಡೆದಾಗ ಸಂತೋಷ ಉಂಟು
ನಿಮ್ಮ ಹರುಷದಲಿ ನನ್ನ ಉಸಿರಿರಲಿ
ನಿಮ್ಮ ಹರುಷದಲಿ ನನ್ನ ಉಸಿರಿರಲಿ
ನನ್ನೆಲ್ಲ ಹಾರೈಕೆ ಈ ಹಾಡಿನಿಂದ

ನೂರೊಂದು ನೆನಪು ಎದೆಯಾಳದಿಂದ
ಹಾಡಾಗಿ ಬಂತು ಆನಂದದಿಂದ||

No comments:

Post a Comment